9.1 C
New York
Friday, October 18, 2024

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ

ಬಳ್ಳಾರಿ : ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ‌ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಹೆಚ್.ಮುನಿಸ್ವಾಮಿ ರವರು ಎಸ್ಪಿ ಸರ್ಕಲ್ ನಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿರವರ ಪುತ್ಥಳಿಗೆ ಪುಷ್ಪ‌ಮಾಲೆ ಹಾಕಿ ನಮನ ಸಲ್ಲಿಸಿದರು.
ಅದೇ ಸಂದರ್ಭದಲ್ಲಿ ಹೆಚ್. ಮುನಿಸ್ವಾಮಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಮಾತನಾಡಿ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ಮಹಾನ್ ಗ್ರಂಥವಾದ ಸಂಪೂರ್ಣ ರಾಮಾಯಣ ಎಂಬ ಪುಸ್ತಕವು ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ, ಹಾಗೂ ಸರ್ವಜನಾಂಗದ ಒಳಿತಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಕೊರ್ಲೂಗುಂದಿ ಪಂಪಪತಿ , ಕೆ ಮಲ್ಲಿನಾಥ್ , ಕ್ರಿಷ್ಣಪ್ಪ , ಸುಧೀರ್ ಕೆ ಬಾಬು ಮೊದಲಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles